Breaking NewsLatestರಾಷ್ಟ್ರೀಯಸುದ್ದಿ
ಕಾಂತಾರ ಸಿನಿಮಾದ ʼವರಾಹರೂಪಂʼ ವಿವಾದ; ಹೊಂಬಾಳೆ ಫಿಲ್ಮ್ಸ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.