ಜಿಲ್ಲಾ ಸುದ್ದಿ

ಸಿಎಂ ಬದಲಾವಣೆ ಊಹಾಪೋಹ; ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಗದಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಗದಗನಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರೀತಿಯ ಉಹಾಪೋಹಗಳಿಗೆ ನಾವು ಬಲಿ ಆಗೋದು ಬೇಡ ಎಂದಿದ್ದಾರೆ.

ಸಿಎಂ ಬಿ ಎಸ್ ಯಡಿಯೂರಪ್ಪ ನಮ್ಮ ಸರ್ಕಾರ ಬಂದ ಮೇಲೆ ಬಹಳ ಚಾಲೆಂಜ್ ಎದುರಿಸಿದ್ದಾರೆ. ಅತಿವೃಷ್ಟಿ ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ.ಅವರೆ ಮುಂದೆವರಿಯುತ್ತಾರೆ, ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ. ಮನೆಯಂದ ಮೇಲೆ ಕೆಲವು ಜಗಳಗಳು ಇರುತ್ತವೆ, ಸ್ವಲ್ಪ ಕಿರಿಕಿರಿ ಇರುತ್ತೇ, ಮತ್ತೆ ಸಾಲ್ವು ಆಗುತ್ತವೆ.ಯಾರೋ ಏನು ಹೇಳಿದ್ರು ಅಂತಾ ಗಾಬರಿ ಪಡಬೇಕಾಗಿಲ್ಲಾ. ನಾನು ಯಾವುದಕ್ಕೂ ಸಹಿ ಮಾಡಿಲ್ಲಾ, ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ಮಾಹಿತಿ ಇಲ್ಲಾ ಎಂದರು.

ಇನ್ನು ಹೈಕಮಾಂಡ ಇರುತ್ತದೆ ಅವರು ಎಲ್ಲದನ್ನು ನೋಡುತ್ತಿರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಅವರಿಗೆ ಬೇಜಾರ ಆಗಿರಬಹುದು.ಹಾಗಾಗಿ ರಾಜೀನಾಮೆ ನೀಡಲು ಸಿದ್ದ ಅಂತಾ ಹೇಳಿದ್ದಾರೆ.ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ, ಖಾಸಗಿ ವೈದ್ಯರ ಜೊತೆಗೆ ಚರ್ಚೆ ಮಾಡುತ್ತಿದ್ದೇವೆ.ಮೂರನೇಯ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವದು ಎಂದ ಸಚಿವೆ ಶಶಿಕಲಾ ಜೋಲ್ಲೆ ಅವರು..

Spread the love

Related Articles

Leave a Reply

Your email address will not be published. Required fields are marked *

Back to top button