ಮೈಸೂರುರಾಜಕೀಯರಾಜ್ಯ

ಸಂದರ್ಭ ಬಂದಾಗ ಎಲ್ಲ ಹೇಳುವೆ; ಸಿಎಂ ರೇಸ್ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ನೀವು ಸಿಎಂ ರೇಸ್​ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಆ ಸಮಯ ಸಂದರ್ಭ ಬಂದಾಗ ಅದನ್ನು ಹೇಳುತ್ತೇನೆ ಎಂಬ ಮಾರ್ಮಿಕ ಉತ್ತರ ನೀಡಿದ್ದಾರೆ. 

ಇಂದು ಸುತ್ತೂರು ಮಠಕ್ಕೆ ಆಗಮಿಸಿದ ಮಾಜಿ ಸಚಿವ ಡಾ. ಜಿ. ಪರಮೇಶ್ವರ್, ಶ್ರೀಗಳ ಆರ್ಶೀವಾದ ಪಡೆದು ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಠಕ್ಕೆ ಬಂದಿಲ್ಲ. ಶ್ರೀಗಳ ಪೂರ್ವಾಶ್ರಮದ ತಾಯಿ ತೀರಿಕೊಂಡಿದ್ದರು. ಆದ್ದರಿಂದ ಶ್ರೀಗಳನ್ನು ಮಾತನಾಡಿಸಲು ಬಂದಿದ್ದೆ ಎಂದರು.

ಅಭಿಮಾನಿ ಒಬ್ಬ ನನ್ನನ್ನು ಭಾವಿ ಮುಖ್ಯಮಂತ್ರಿ ಎಂದು ಕೂಗಿದ್ದಾನೆ. ಅವನಿಗೆ ಆ ರೀತಿ ಕೂಗಬೇಡ ಎಂದು ಹೇಳಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು‌.

ನಂತರ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿ ಈಗ ಮುಂದಿನ ಸಿಎಂ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇನ್ನೂ ಚುನಾವಣೆ 2 ವರ್ಷ ಇದೆ. ಮೊದಲು ಬಿಜೆಪಿ ಸರ್ಕಾರವನ್ನು ಕಿತ್ತುಹಾಕಬೇಕು. ನಂತರ ಕಾಂಗ್ರೆಸ್ ಬಹುಮತ ಪಡೆಯಲು ನಾವೆಲ್ಲಾ ಗೆಲ್ಲಬೇಕು. ಬಹುಮತ ಬಂದಮೇಲೆ ಶಾಸಕಾಂಗ ಸಭೆ ನಡೆಸಿ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ದರಾಗಿರುತ್ತೇವೆ. ಹೈಕಮಾಂಡ್ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಸಾಮಾನ್ಯವಾಗಿ ಕಾಂಗ್ರೆಸ್ ನಲ್ಲಿ ಕೆ.ಪಿ.ಸಿ‌.ಸಿ‌. ಅಧ್ಯಕ್ಷರು ಮುಖ್ಯಮಂತ್ರಿ ಆಗುವುದು ವಾಡಿಕೆ. ಆದರೆ ಕೆ.ಪಿ.ಸಿ.ಸಿ‌ ಅಧ್ಯಕ್ಷನಾಗಿದ್ದಾಗ ನಾನು ಸೋತೆ. ಬೇರೆಯವರು ಮುಖ್ಯಮಂತ್ರಿಯಾದರು ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿರುವವರಿಗೆ ಪರೋಕ್ಷ ಟಾಂಗ್ ನೀಡಿದರು‌.

Spread the love

Related Articles

Leave a Reply

Your email address will not be published. Required fields are marked *

Back to top button