ಜಿಲ್ಲಾ ಸುದ್ದಿ
ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ ವಿತರಣೆ

ಚನ್ನಪಟ್ಟಣಕ್ಕೆ 10 ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಸಂಸದ ಡಿ.ಕೆ.ಸುರೇಶ್ ವಿತರಿಸಿದರು.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕೋವಿಡ್ ಕೇರ್ ಸೆಂಟರ್ಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು. ಚನ್ನಪಟ್ಟಣದ 5 ಕೋವಿಡ್ ಸೆಂಟರ್ಗಳಿಗೂ ಭೇಟಿ ನೀಡಿದ ಅವರು, ಸೋಂಕಿತರಿಗೆ ಧೈರ್ಯ ತುಂಬಿದರು.
ಜನರು ಧೈರ್ಯದಿಂದ ಕೊರೋನಾ ಎದುರಿಸಬೇಕು. ನಮ್ಮಿಂದ ಯಾವುದೇ ಸಹಾಯ ಬೇಕಾದರೂ ನಾವು ಮಾಡಲು ಸಿದ್ಧ ಎಂದು ಅವರು ಹೇಳಿದರು.