ಈ ಕ್ಷಣ :

ಚಾಮರಾಜನಗರ ಆಕ್ಸಿಜನ್​​​​​ ದುರಂತ ಸರ್ಕಾರ ಮಾಡಿದ ಕೊಲೆ: ಡಿ ಕೆ ಶಿವಕುಮಾರ್​

Published 15 ಮಾರ್ಚ್ 2023, 23:29 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ ಮೃತಪಟ್ಟವರ ಸಾವು ಸಹಜ ಸಾವಲ್ಲ ಇದು ಸರ್ಕಾರ ಮಾಡಿರುವ ಕೊಲೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಾಖ್ಯಾನಿಸಿದರು.

ಆಕ್ಸಿಜನ್ ದುರಂತದಿಂದ ಮೃತಪಟ್ಟವರ ಕುಟುಂಬಕ್ಕೆ ಇಂದು ಡಿ.ಕೆ ಶಿವಕುಮಾರ್  ತಲಾ 1 ಲಕ್ಷ ರೂ. ಪರಿಹಾರ ವಿತರಿಸಿದರು. ನಂತರ ಮಾತನಾಡಿದ ಅವರು, ಇದು ಸರ್ಕಾರವೇ ಮಾಡಿದ ಕೊಲೆ. ಆಕ್ಸಿಜನ್ ಸಿಗದೆ ಸಾವೆಂದು ನ್ಯಾಯಾಲಯ ಹೇಳಿದೆ. ಇಷ್ಟಾದರೂ ಅಧಿಕಾರಿಗಳು ಮತ್ತು ಸಚಿವರ ವಿರುದ್ಧ ಕ್ರಮ ಕೈಗೊಂಡಿಲ್ಲ. ದುರಂತದಲ್ಲಿ ಮೃಪಟ್ಟವರ ಕುಟುಂಬಕ್ಕೆ ಸರ್ಕಾರ 2 ಲಕ್ಷ ರೂ ಪರಿಹಾರ ನೀಡಿದೆ. ಆದರೆ ನಾನು 1 ಲಕ್ಷ ರೂ. ಪರಿಹಾರ ನೀಡುತ್ತೇನೆ ಎಂದರು.

ಹನೂರು ಪಟ್ಟಣದ ಕೆಂಪನಂಜಯ್ಯ ಹಾಗೂ ಮಹಾದೇವಮ್ಮ ಎಂಬುವರು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಹಿನ್ನಲೆಯಲ್ಲಿ ಮೃತರ ಕುಟುಂಬಗಳಿಗೆ ಬೇಟಿ ನೀಡಿದ ಡಿ.ಕೆ.ಶಿವಕುಮಾರ್ ಮೊದಲಿಗೆ ಕೆಂಪನಂಜಯ್ಯ ಅವರ ಮನೆಗೆ ತೆರಳಿದ ವೇಳೆ ಕುಟುಂಬಸ್ಥರನ್ನು ಸಂತೈಸಿದರು. ಗತಿಸಿ ಹೋದವರನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳದೇ ಜೀವನ ಸಾಗಿಸಿ ಎಂದರು.

ಮಗಳಾದ ಪದ್ಮ ಅವರ ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದು ಉದ್ಯೋಗದ ಅವಶ್ಯಕತೆ ಇದ್ದರೆ ಭೇಟಿಯಾಗಬಹುದು ಎಂದು ಭರವಸೆ ನೀಡಿದರು. ಹನೂರಿನಲ್ಲಿ ವಿದ್ಯಾರ್ಥಿಗಳು, ನಿರುದ್ಯೋಗಿಗಳ ಅಹವಾಲು ಸ್ವೀಕರಿಸಿದರು.

ಕೊಳ್ಳೆಗಾಲ ತಾಲೂಕಿನ ಚಿನ್ನಪ್ಪನಪುರದೊಡ್ಡಿಯ ಕೊರೋನಾ ಸೋಂಕಿತ ರಂಗಸ್ವಾಮಿ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಅವರು, ಮೃತರ ಪತ್ನಿ ಪುಷ್ಪಾ ರಂಗಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ 1 ಲಕ್ಷ ರುಪಾಯಿ ಪರಿಹಾರದ ಚೆಕ್ ವಿತರಿಸಿದರು. ನಂತರ ತಾಲೂಕಿನ ಪಾಳ್ಯದ ಬಿಳಿಗಿರಿ ರಂಗನಾಯ್ಕ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಮೃತರ ಪತ್ನಿ ವೆಂಕಟಮ್ಮ ಅವರಿಗೆ ಪರಿಹಾರದ ಚೆಕ್ ವಿತರಿಸಿದರು.

ಭಯದಿಂದ ಚಾಮರಾಜನಗರಕ್ಕೆ ಸಿಎಂ ಹೋಗುತ್ತಿಲ್ಲ:

ಯಡಿಯೂರಪ್ಪಗೆ ಜನ ಹೊಡೆಯುತ್ತಾರೆ ಎಂಬ ಭಯ ಇದೆ. ಹೀಗಾಗಿ ಚಾಮರಾಜನಗರಕ್ಕೆ ಬರುವ ಧೈರ್ಯವನ್ನ ಮಾಡುತ್ತಿಲ್ಲ.  ಗುಪ್ತಚರ ಇಲಾಖೆ ಅವರಿಗೆ ಮಾಹಿತಿ ನೀಡಿದೆ. ಅಧಿಕಾರದಲ್ಲಿದ್ದಾಗ ತಪ್ಪು ಮಾಡಿದಾಗ ಜನ ಬೈಯುತ್ತಾರೆ. ಆದರೆ ಅದನ್ನ ಸ್ವೀಕರಿಸಬೇಕು. ಆದರೆ ಅದನ್ನ ಸಿಎಂ ಬಿಎಸ್ ವೈ ಮಾಡಿಲ್ಲ ಎಂದು ಡಿ.ಕೆ ಶಿವಕುಮಾರ್ ಲೇವಡಿ ಮಾಡಿದರು.

ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲರ ಮನೆಗೂ ಹೋಗೋದು ಬೇಡ. ಚಾಮರಾಜನಗರಕ್ಕೆ ಬಂದು ಸಾಂತ್ವನ ಹೇಳುವ ಕೆಲಸ ಮಾಡಲಿ. ಈ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಎಳೆ ಎಳೆಯಾಗಿ ಬಿಚ್ಚಿಡುತ್ತೇವೆ ಎಂದು ತಿಳಿಸಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45