ಈ ಕ್ಷಣ :

ಪತಿ ಎರಡನೇ ಮದುವೆ; ದೂರು ದಾಖಲಿಸಲು ಹೋದ ಪತ್ನಿ, ಕುಟುಂಬಸ್ಥರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

Published 15 ಮಾರ್ಚ್ 2023, 23:30 IST
Last Updated 6 ಮೇ 2023, 20:01 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬಾಗಲಕೋಟೆ: ಪತಿ ಎರಡನೆ ಮದುವೆಯಾಗಿದ್ದು, ನನಗೆ ನ್ಯಾಯ ಕೊಡಿಸಿ ಎಂದು ದೂರು ನೀಡಲು ಹೋದ ಪತ್ನಿ ಹಾಗೂ ಸಂಬಂಧಿಕರ ಮೇಲೆ ಪೊಲೀಸರೇ ಹಲ್ಲೆ ನಡೆಸಿರುವ ಆರೋಪ ಬಾಗಲಕೋಟೆಯಲ್ಲಿ ಕೇಳಿಬಂದಿದೆ.

ಬಾಗಲಕೋಟೆಯ ಕಲಾದಗಿ ಪೊಲೀಸ್ ಠಾಣೆಗೆ ತುಳಸಿಗೇರಿ ಗ್ರಾಮದ ಪತ್ನಿ ಲಕ್ಷ್ಮೀಬಾಯಿ ಸಕಲಾದಗಿ ಹಾಗೂ ಸಹೋದರ, ಕುಟುಂಬಸ್ಥರು ಹೋಗಿದ್ದಾಗ ಈ ಘಟನೆಯಲ್ಲಿ ನಡೆದಿದ್ದು,ಇದೀಗ ನೊಂದ ಕುಟುಂಬಸ್ಥರು ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋಗಿದ್ದಾರೆ.ಕಲಾದಗಿ ಪೊಲೀಸ್ ಠಾಣೆಯ ಪಿಎಸ್.ಐ ರವಿ ಪವಾರ್ ದರ್ಪಕ್ಕೆ ರೋಸಿಹೋದ ನೊಂದ ಕುಟುಂಬಸ್ಥರು ಎಸ್ಪಿ ಕಚೇರಿ ಬಳಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳಬೇಕು, ನಮಗೆ ನ್ಯಾಯ ಕೊಡಿಸಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

ರಂಗಪ್ಪನ ಪತ್ನಿ ಲಕ್ಷ್ಮೀಬಾಯಿ, ಸಚೀನ್ ಗಿಡ್ಡಿ, ಶ್ರೀಕಾಂತ್ ಸಕಲಾದಗಿ ಎಂಬುವರ ಮೇಲೆ ಕಲಾದಗಿ ಪಿ.ಎಸ್.ಐ ರವಿ ಪವಾರ್ ಹಾಗೂ ಸಿಬ್ಬಂದಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಚೀನ್ ಗಿಡ್ಡಿ, ಶ್ರೀಕಾಂತ್ ಸಕಲಾದಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಕಣ್ಣು, ತಲೆಯ ಭಾಗ, ಎದೆಗೆ ಬಲವಾಗಿ ಹಲ್ಲೆ ಮಾಡಿರುವುದರಿಂದ ಸಚಿನ್ ಹಾಗೂ ಶ್ರೀಕಾಂತ್ ಅಸ್ವಸ್ಥಗೊಂಡಿದ್ದಾರೆ.

ಪಿಎಸ್ಐ ಯಾವುದೋ ಒತ್ತಡಕ್ಕೊಳಗಾಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.ಲಕ್ಷ್ಮೀಬಾಯಿ ಹಾಗೂ ರಂಗಪ್ಪ ಮಧ್ಯೆ ಮದುವೆಯಾಗಿ 20 ವರ್ಷವಾಗಿದೆ. 15ವರ್ಷದ ಮಗಳಿದ್ರೂ ಮತ್ತೊಂದು ಮದುವೆಯಾಗಿದ್ದಾನೆ ಅಂತೆ.ನನ್ನ ದೂರು ದಾಖಲಿಸಿಕೊಂಡು ನ್ಯಾಯ ಕೊಡಿಸಿ ಎಂದು ಕೇಳಲು ಹೋದ ಮಹಿಳೆಗೆ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ.ರಂಗಪ್ಪನ ಸಹೋದರಿ ಗಂಗವ್ವ ಹುಲ್ಲಾರ ಎರಡನೇ ಮದುವೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ರಂಗಪ್ಪ ಜೊತೆ ಪವಿತ್ರಾ ಎರಡನೇ ಮದುವೆಯಾಗಿದ್ದಾರೆ.ಎರಡನೇ ಮದುವೆಯಾಗಿರುವ ದಾಖಲೆ ತೆಗೆದುಕೊಂಡು ಹೋದ್ರೂ ಪಿಎಸ್ಐ ದೂರು ದಾಖಲಿಸಿಕೊಂಡಿಲ್ಲ. ಇನ್ನು ರಂಗಪ್ಪ ಹಾಗೂ ಲಕ್ಷ್ಮಿ ಸಂಸಾರಕ್ಕೆ ರಂಗಪ್ಪನ ಸಹೋದರಿ ಗಂಗವ್ವ ವಿಲನ್ ಆಗಿದ್ದಾಳೆ ಎಂದು ನೊಂದ ಪತ್ನಿ ಆರೋಪಿ‌ಸಿದ್ದಾಳೆ. ಪಿಎಸ್ಐ ರವಿ ಪವಾರ್, ಪೊಲೀಸ್ ಪೇದೆ ತೇರದಾಳ, ಶೆಟ್ಟರ್ ಎಂಬುವರಿಂದ ಹಲ್ಲೆಯಾಗಿದೆ.ನಮಗೆ ಪೊಲೀಸ್ ವರಿಷ್ಠಾಧಿಕಾರಿ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45