ಈ ಕ್ಷಣ :

ಅನಧಿಕೃತ ಕೃಷಿ ಪರಿಕರ ಮಾರಾಟ ಕೇಂದ್ರದ ಮೇಲೆ ದಾಳಿ; 2ಲಕ್ಷ ಮೌಲ್ಯದ ಕೀಟನಾಶಕ ಜಪ್ತಿ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 18:23 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಬಾಗಲಕೋಟೆ: ಬಾದಾಮಿಯಲ್ಲಿ ಪರವಾನಗಿ ಪಡೆಯದೇ ಕೃಷಿ ಪರಿಕರ ಮಾರಾಟ ಮಾಡುತ್ತಿದ್ದ ಕೇಂದ್ರದ ಮೇಲೆ ಜಾರಿದಳದ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ. ಜಾರಿ ದಳದ ಸತೀಶ ಮಾವಿನಕೊಪ್ಪ ಹಾಗೂ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಮಾಳೆದ, ಕೃಷಿ ಅಧಿಕಾರಿ ಮಹೇಶ್ ಕಟಗೇರಿ ಇವರ ನೇತೃತ್ವದ ತಂಡ ತಾಲೂಕಿನಲ್ಲಿರುವ ಕೃಷಿ ಪರಿಕರ ಮಾರಾಟ ಮಾಡುವ ಮಳಿಗೆಗಳಿಗೆ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದಾಗ ಬಾದಾಮಿ ಪಟ್ಟಣದ ಶ್ರೀ ಮಲ್ಲಿಕಾರ್ಜುನಟ್ರೇಡಿಂಗ್ ಕಂಪನಿ ಕೀಟನಾಶಕ ಮಾರಾಟ ಪರವಾನಗಿ ಪಡೆಯದೆ ಕೀಟನಾಶಕ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಾರಾಟ ಮಳಿಗೆಯಲ್ಲಿ ದಾಸ್ತಾನಿದ್ದ ೨ಲಕ್ಷ ೧೭ಸಾವಿರ ಮೌಲ್ಯದ ೭೯.೫೫ಲೀಟರ್ ಹಾಗೂ ೫೧.೦೭ ಕೇಜಿ ಕೀಟನಾಶಕವನ್ನು ಜಪ್ತಿ ಮಾಡಿ, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಇನ್ನು ಮುಂದೆ ಯಾವುದೇ ಕೃಷಿ ಪರಿಕರ ಮಾರಾಟಗಾರರು ಅನಧಿಕೃತ ದಾಸ್ತಾನು ಮಾಡುವುದಾಗಲಿ ಹಾಗೂ ನಿಯಮ ಉಲ್ಲಂಘಣೆ ಮಾಡಿ ಮಾರಾಟ ಕಂಡು ಬಂದರೆ ಕಾನೊನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾದ ಹಿನ್ನಲೆಯಲ್ಲಿ ಬಾದಾಮಿ ಹಾಗೂ ತಾಲೂಕಿನ ಕುಳಗೇರಿ, ಕೆರೂರ ಗುಳೇದಗುಡ್ಡ ರೈತ ಸಂಪರ್ಕ ಕೇಂದ್ರಗಳಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜವನ್ನು ದಾಸ್ತಾನುಕರಿಸಿ, ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಪ್ರಸ್ತುತ ತಾಲೂಕಿನಲ್ಲಿ ಹೆಸರು ೭೮.೦೦ ಕ್ವಿಂಟಾಲ್, ತೊಗರಿ ೨೫.೨೦ ಕ್ವಿಂಟಾಲ್, ಮುಸುಕಿನ ಜೋಳ ೨೬೭.೨೩ ಕ್ವಿಂಟಾಲ್, ಸಜ್ಜೆ ೫೧.೫೨ ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಮಾಡಲಾಗಿದೆ. ಹೆಸರು ಬೆಳೆಯ ಬಿತ್ತನೆ ಬೀಜದ ೫ ಕೀಲೋ ಪ್ಯಾಕೇಟ್ ಗೆ ಸಾಮಾನ್ಯ ರೈತರಗೆ ರೂ. ೪೯೫/- ಪ.ಜಾ/ಪ.ಪಂ. ರೈತರಿಗೆ ರೂ. ೪೩೫/-, ತೊಗರಿ ೫ ಕೀಲೋ ಪ್ಯಾಕೇಟ್ ಗೆ ಸಾಮಾನ್ಯ ರೈತರಗೆ ರೂ. ೪೦೦/- ಪ.ಜಾ/ಪ.ಪಂ. ರೈತರಿಗೆ ರೂ. ೩೩೭.೫೦, ಬಿತ್ತನೆ ಬೀಜವನ್ನು ಎಲ್ಲಾ ವರ್ಗದ ರೈತರಿಗೆ ಗರಿಷ್ಟ ೨.೦ ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡವಳಿ ಯಾವುದು ಕಡಿಮೆಯೋ ಆ ವಿಸ್ತೀರ್ಣಕ್ಕೆ ಬೇಕಾವಷ್ಟು ವಿತರಣೆ ಮಾಡಲಾಗುವುದು. ಸರಕಾರ ಮತ್ತು ಜಿಲ್ಲಾಡಳಿತ ನಿಗದಪಡಿಸಿದ ಸಮಯಲ್ಲಿಯೇ ಚಾಲ್ತಿ ಮಾರ್ಗಸೂಚಿಯ ಪ್ರಕಾರ ಜೂನ್ ೭ ರೊಳಗೆ ಬೆಳಿಗ್ಗೆ ೬.೦೦ ರಂದ ೧೦.೦೦ ಗಂಟೆಯವರೆಗೆ ತಮಗೆ ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಆಧಾರ ಕಾರ್ಡಿನ ಪ್ರತಿಯೊಂದಿಗೆ ಕೋವಿಡ್-೧೯ ಮಾರ್ಗಸೂಚಿಗಳನ್ನು ಪಾಲಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಬಿತ್ತನೆ ಬೀಜವನ್ನು ಪಡೆದುಕೊಳ್ಳಬೇಕೆಂದು ತಾಲೂಕಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್.ನಾಗೂರ ತಿಳಿಸಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45