ಈ ಕ್ಷಣ :

ಪಶ್ಚಿಮ ಘಟ್ಟದ 1400 ಕಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಪ್ರಸ್ತಾವನೆ: ಪರಿಸರ ಹೋರಾಟಗಾರರು ಕೆಂಡಾಮಂಡಲ..!

Published 16 ಮಾರ್ಚ್ 2023, 12:28 IST
Last Updated 4 ಮೇ 2023, 22:18 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

NEWS:

ಬೆಂಗಳೂರು : ಪಶ್ಚಿಮಘಟ್ಟ ಪ್ರದೇಶದಲ್ಲಿ ಹರಿಯುವ ನದಿಗಳಿಗೆ ಅಲ್ಲಲ್ಲಿ ಚಿಕ್ಕ ಚಿಕ್ಕ ಡ್ಯಾಂಗಳನ್ನು ನಿರ್ಮಾಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದೊಂದು ಮೂರ್ಖ ಮತ್ತು ಅವೈಜ್ಞಾನಿಕ ಯೋಜನೆ ಎಂದು ಆರೋಪಿಸಿದ್ದಾರೆ.

ಈಗಾಗಲೇ 1400 ಕಡೆಗಳಲ್ಲಿ ಚಿಕ್ಕ ಚಿಕ್ಕ ಡ್ಯಾಂಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪ್ರಾರಂಭಿಕ ಹಂತವಾಗಿ 3900 ಕೋಟಿ ರೂಪಾಯಿ ಮೀಸಲಿಡಲು ನಿರ್ಧರಿಸಿದೆ. ಸಣ್ಣ ನೀರಾವರಿ ಸಚಿವ ಜೆ. ಸಿ. ಮಾಧುಸ್ವಾಮಿ ಒಂದು ಹೆಜ್ಜೆ ಮುಂದೆ ಹೋಗಿ ಈ ಯೋಜನೆಗೆ ನೆರವು ನೀಡುವಂತೆ ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ನದಿಗಳು ಸಮುದ್ರ ಸೇರುವ ಸ್ಥಳದಲ್ಲಿ ನೀರು ಸಂಗ್ರಹ ಮಾಡುವ ಉದ್ದೇಶದಿಂದ ಸಣ್ಣ ಸಣ್ಣ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗುವುದು. ಈ ಮೂಲಕ ನೀರು ಪೋಲಾಗುವುದನ್ನು ತಪ್ಪಿಸಬೇಕೆಂಬ ಉದ್ದೇಶ ಎನ್ನುವುದು ಸರ್ಕಾರದ ವಾದ.

ಪರಿಸರವಾದಿಗಳು ಏನೆನ್ನುತ್ತಾರೆ…?

ಇನ್ನು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವರು ಈ ಯೋಜನೆ ಜಾರಿಗೆ ತರಲು ಮುಂದಾಗಿರುವುದು ಪರಿಸರವಾದಿಗಳ ಕಣ್ಣು ಕೆಂಪಾಗಿಸಿದೆ. ಇಂತಹ ಯೋಜನೆಗಳಿಂದ ಹಣ ದುರ್ಬಳಕೆ ಆಗುತ್ತದೆ ಅಷ್ಟೇ ಎಂದ ಹೇಳುತ್ತಾರೆ.

ಅಖಿಲೇಶ್ ಚಿಪ್ಪಳಿ

ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಪಳಿ ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ನದಿಗಳ ಮೂಲ, ಹರಿಯುವಿಕೆ ಹಾಳು ಮಾಡುವಂಥದ್ದು. ಚಿಕ್ಕ ಚಿಕ್ಕ ಡ್ಯಾಂಗಳ ನಿರ್ಮಾಣ ಮಾಡುವುದರಿಂದ ಜಮೀನು, ಅರಣ್ಯ ನಾಶ, ಬೆಲೆಬಾಳುವ ಮರಗಳು, ಔಷಧೀಯ ಸಸ್ಯಗಳ ಗುಣವುಳ್ಳ ಗಿಡಮೂಲಿಕೆಗಳು ನಾಶವಾಗಲಿದೆ. ಹಾಗಾಗಿ ಇದೊಂದು ಅವೈಜ್ಞಾನಿಕ ಹಾಗೂ ಮೂರ್ಖತನದಿಂದ ಕೂಡಿದ್ದಾಗಿದೆ. ಎತ್ತಿನಹೊಳೆ ಯೋಜನೆಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದ್ದರೂ ಏನೂ ಪ್ರಯೋಜನ ಆಗಿಲ್ಲ. ಆದರೆ, ಈಗ ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳ ಒಡಲಿಗೆ ಕೈ ಹಾಕಿರುವ ಸರ್ಕಾರ ವನ್ಯಜೀವಿಗಳ ಸಂತತಿ ಮಾರಣಹೋಮಕ್ಕೆ ಮುಂದಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ 1400 ಕಡೆ ಜಾಗ ಗುರುತಿಸಿದೆಯಾದರೂ ಹಣ ವ್ಯಯ ಮಾಡಿ ಜೇಬು ತುಂಬಿಸಿಕೊಳ್ಳುವುದೇ ಆಗಿದೆ. ಈಗಿರುವ ಯೋಜನಾ ಗಾತ್ರ 30 ಸಾವಿರ ಕೋಟಿ ರೂಪಾಯಿ ದಾಟಿದರೂ ಅಚ್ಚರಿ ಪಡಬೇಕಿಲ್ಲ. ಇಂಥ ಯೋಜನೆಗಳನ್ನು ಸರ್ಕಾರ ಮಾಡಲೇಬಾರದು. ಅನುಷ್ಠಾನಕ್ಕೆ ಮುಂದಾದರೆ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ. ಸಮುದ್ರಕ್ಕೆ ಸೇರುವ ನೀರು ಬಳಕೆ ಮಾಡಿಕೊಳ್ಳುವ ಉದ್ದೇಶದ ಯೋಜನೆ ಎಂಬುದೇ ಅವಾಸ್ತವಿಕ ಮತ್ತು ಯಾರೂ ಒಪ್ಪುವಂಥದ್ದಲ್ಲ. ವಿರೋಧ ಪಕ್ಷಗಳು ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಬೀದಿಗಿಳಿಯಬೇಕು‌. ಈ ಮೂಲಕ ಪಶ್ಚಿಮಘಟ್ಟದ ಪರಿಸರ ಉಳಿಸಲು ಪಣ ತೊಡಬೇಕು ಎಂದು ಅಖಿಲೇಶ್ ಅವರು ಹೇಳಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45