ಈ ಕ್ಷಣ :

ಮತ್ತೆ ಮುನ್ನಲೆಗೆ ಬಂದ ರಫೆಲ್ ಹಗರಣ : ಫ್ರಾನ್ಸ್​​ನ ಪಿಎನ್ಎಫ್ ನಿಂದ ತನಿಖೆಗೆ ಆದೇಶ

Published 15 ಮಾರ್ಚ್ 2023, 23:38 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ನವದೆಹಲಿ : ರಫೇಲ್ ಯುದ್ದ ವಿಮಾನಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರಷ್ಟಾಚಾರದ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ರಫೇಲ್ ಹಗರಣವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರದ ಸತತ ಪ್ರಯತ್ನಗಳ ನಂತರವು ಹಗರಣ ಹೆಡೆ ಎತ್ತಿ ನಿಂತಿದೆ. ಶತಕೋಟಿ ಡಾಲರ್‌ಗಳಲ್ಲಿ ನಡೆದಿರುವ ರಫೇಲ್ ಹಗರಣ ಬಗ್ಗೆ ಫ್ರಾನ್ಸ್‌ ನ ಸಾರ್ವಜನಿಕ ಸೇವೆಗಳು ಮತ್ತು ಆರ್ಥಿಕ ಅಪರಾಧ ಶಾಖೆ (ಪಿಎನ್ಎಫ್) ಈ ಒಪ್ಪಂದದ ಬಗ್ಗೆ ಭ್ರಷ್ಟಾಚಾರ ಆರೋಪವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಆದೇಶಿಸಿದೆ. ಇದಕ್ಕಾಗಿ, ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಪ್ರಾನ್ಸ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿಯೇತರ ಸಂಸ್ಥೆ ಶೆರಪ (Sherpa) ಈ ಬಗ್ಗೆ 2018 ರಲ್ಲಿ ರಫೆಲ್‌ ಖರೀದಿಯಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎಂದು ಆರೋಪಿಸಿ ಮೊಕದ್ದಮೆಯನ್ನು ಹೂಡಿತ್ತು. ಇದರಲ್ಲಿ ರಫೇಲ್ ಒಪ್ಪಂದಕ್ಕೆ ಸಹಿ ಹಾಕಿದ ಪ್ರಾನ್ಸ್ ನ ಮಾಜಿ ಅಧ್ಯಕ್ಷ ಪ್ರಾನ್ಸ್ ವಾ ಓಲಾಂಡ್ ಮತ್ತು ಅಂದಿನ ವಿತ್ತಮಂತ್ರಿ ಮತ್ತು ಈಗಿನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೊ ಅಂದಿನ ರಕ್ಷಣಾ ಮತ್ತು ವಿದೇಶಾಂಗ ಮಂತ್ರಿ ಜೀನ್ ಯವೇಶ್ ಲೇಡ್ರಿಯಾನ್ ಇವರುಗಳ ಸುತ್ತ ಈ ಅರಬ್ ಮೊತ್ತದ ದೊಡ್ಡ ಹಗರಣ ಸುತ್ತಿಕೊಂಡಿದೆ.

ಪ್ರಾನ್ಸ್ ನ ಕಂಪನಿ ಡಾಸೋ ಭಾರತದಲ್ಲಿನ ಮಧ್ಯವರ್ತಿಗಳಿಗೆ ಬಹಳಷ್ಟು ಹಣವನ್ನು ನೀಡಿತ್ತು, ಎಂದು ಫ್ರೆಂಚ್ ತನಿಖಾ ಜಾಲತಾಣ ಮೀಡಿಯಾ ಪಾರ್ಟ್ ವರದಿ ಮಾಡಿತ್ತು ಮತ್ತು ರಫೇಲ್ ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆಯೂ ಹಲವಾರು ವರದಿಗಳನ್ನು ಮಾಡಿತ್ತು.

2015 ರ ಮಾರ್ಚ್ 26 ರಂದು ಪ್ರಾನ್ಸ್ ನ ಕಂಪನಿ ಡಾಸೋ ಮತ್ತು ಭಾರತದ ರಿಲಯನ್ಸ್ ಕಂಪನಿಗಳು ಮಾತುಕತೆ ನಡೆಸಿದ ಎರಡು ವಾರಗಳ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಾನ್ಸ್ ಗೆ ಭೇಟಿ ನೀಡಿ ಅಲ್ಲಿನ ಆಗಿನ ಅಧ್ಯಕ್ಷ ಪ್ರಾನ್ಸ್ ವಾ ಓಲಾಂಡ್ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದರು.

ಈ ಬೆಳವಣಿಗೆಯ ನಂತರ ಯಾವುದೇ ಕೆಲಸ ಕಾರ್ಯವಿಲ್ಲದ ಅನಿಲ್ ಅಂಬಾನಿಯ ಕಂಪನಿಯಲ್ಲಿ ಪ್ರಾನ್ಸ್ ನ ಡಾಸೋ ಕಂಪನಿಯು ಪ್ರಾರಂಭಿಕ ಮೊತ್ತ 280 ಕೋಟಿ ಹೂಡಿಕೆ ಮಾಡಿತ್ತು. ಇದೇ ಸಂದರ್ಭದಲ್ಲಿ ಅಗಸ್ತ್ಯ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಸುಶೀಲ್ ಗುಪ್ತ ಈ ಹಗರಣದಲ್ಲಿ ಮಧ್ಯವರ್ತಿಗಳಲೊಬ್ಬನಾಗಿ ಬಹಳ ದೊಡ್ಡ ಮೊತ್ತವನ್ನು ಜೇಬಿಗಿಳಿಸಿದ್ದ.

ಪ್ರಾನ್ಸ್ ನಲ್ಲಿ ರಫೇಲ್ ಹಗರಣದ ಕುರಿತು ತನಿಖೆಗೆ ಅಲ್ಲಿನ ಸಾರ್ವಜನಿಕ ಸೇವೆಗಳು ಮತ್ತು ಆರ್ಥಿಕ ಅಪರಾಧ ಶಾಖೆ (ಪಿಎನ್ಎಫ್) ನ್ಯಾಯಾಧೀಶರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ರಫೇಲ್ ಯುದ್ಧವಿಮಾನಗಳ ಖರೀದಿ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಿಂದ ತನಿಖೆಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಿರೋಧದ ವಿಷಯವಲ್ಲ, ಇದು ರಾಷ್ಟ್ರದ ರಕ್ಷಣೆ ಮತ್ತು ಭದ್ರತೆಯ ಬಗೆಗಿನ ರಕ್ಷಣಾ ಒಪ್ಪಂದದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ. ಇದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ.

ಈ ವ್ಯವಹಾರದಲ್ಲಿ ನಡೆದಿರವ ಭ್ರಷ್ಟಾಚಾರದ ಕುರಿತು ಸತ್ಯವನ್ನು ಬಯಲಿಗೆಳೆಯಲು ಇದೊಂದೇ ಮಾರ್ಗವಾಗಿದೆ, ಎಂದಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಹೇಳಿದೆ.

59,000 ಕೋ.ರೂಪಾಯಿಗಳ ವ್ಯವಹಾರದಲ್ಲಿ ಭ್ರಷ್ಟಾಚಾರ ಆರೋಪಗಳ ಕುರಿತು ಭಾರತದಲ್ಲಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ ರಾಹುಲ್ ಗಾಂಧಿ ಹೇಳಿದ ಗಡ್ಡದ ಕಳ್ಳನೂ ಸೇರಿದಂತೆ ರಿಲಯನ್ಸ್ ನ ಅನಿಲ್ ಅಂಬಾನಿ ಮತ್ತು ಉಳಿದಂತೆ ಇದಕ್ಕೆ ಸಹಕರಿಸಿದ ಇಡೀ ವ್ಯವಸ್ಥೆಯ ಪ್ರಮುಖ ಮುಖಗಳು ಜೈಲು ಸೇರಲಿದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45