ಈ ಕ್ಷಣ :

ರಾಂಪತ್ರೆ ಜಡ್ಡಿ ಸಂರಕ್ಷಣೆಗಾಗಿ 'ಸ್ನೇಹಕುಂಜ'ಕ್ಕೆ ವಿಶ್ವಸಂಸ್ಥೆಯ ‘ಈಕ್ವೆಟರ್ 2021’ ಪ್ರಶಸ್ತಿ

Published 16 ಮಾರ್ಚ್ 2023, 12:21 IST
Last Updated 7 ಮೇ 2023, 00:03 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL:

ಕಾರವಾರ : ವಿಶ್ವಸಂಸ್ಥೆಯ ಈ ವರ್ಷದ ‘ಈಕ್ವೆಟರ್ 2021’ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ರಾಂಪತ್ರೆ ಜಡ್ಡಿ ಪುನಶ್ಚೇತನಕ್ಕಾಗಿ ಸ್ನೇಹಕುಂಜ ಟ್ರಸ್ಟ್​ಗೆ ದೊರೆತಿದೆ.

ನರಸಿಂಹ ಹೆಗಡೆ ನೇತೃತ್ವದ ತಂಡ ಹಲವು ವರ್ಷಗಳ ಕಾಲ ಸ್ನೇಹಕುಂಜ ಸಂಸ್ಥೆಯ ಮುಖೇನ ರಾಂಪತ್ರೆ ಜಡ್ಡಿ ಪಾರಂಪರಿಕ ಪುನಶ್ಚೇತನ ಕೆಲಸವನ್ನು ಜನ ಸಹಭಾಗಿತ್ವದಲ್ಲಿ ಕೈಗೊಂಡು ಯಶಸ್ವಿಯಾಗಿಸಿತ್ತು. 130 ದೇಶಗಳ 600ಕ್ಕೂ ಹೆಚ್ಚು ಸಂಸ್ಥೆಗಳು ನಾಮ ನಿರ್ದೇಶಿತವಾಗಿದ್ದವು. ಭಾರತದಿಂದ ಆಯ್ಕೆಯಾದ ಎರಡು ಸಂಸ್ಥೆಗಳಲ್ಲಿ ಉತ್ತರಕನ್ನಡದ ಸ್ನೇಹಕುಂಜ ಸಂಸ್ಥೆ ಒಂದಾಗಿದೆ.

ಸಾಮಾನ್ಯವಾಗಿ ವಿಶ್ವಸಂಸ್ಥೆಯ ಕೇಂದ್ರ ಕಛೇರಿ ನ್ಯೂಯಾರ್ಕನಲ್ಲಿ ವಾರಗಳ ಕಾಲ ನಡೆಯುವ ವಾರ್ಷಿಕ ಅಧಿವೇಶನದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಕೊರೋನಾ ಕಾರಣ ಪ್ರಶಸ್ತಿ ಸಮಾರಂಭ ಆನ್‍ಲೈನ್ ಮೂಲಕ ನಡೆಯಲಿದ್ದು, ಪ್ರಶಸ್ತಿಯ ಮೊತ್ತ ಹತ್ತು ಸಾವಿರ ಅಮೆರಿಕನ್ ಡಾಲರ್ (ಸುಮಾರು ಏಳೂವರೆ ಲಕ್ಷ ರೂಪಾಯಿಗಳು) ಆಗಿದೆ.

ನರಸಿಂಹ ಹೆಗಡೆ

ನಿಸರ್ಗ ಆಧಾರಿತ ಹವಾಮಾನ ವೈಪರೀತ್ಯ ತಡೆಗೆ ಕೈಗೊಂಡ ಕೆಲಸಗಳು, ಜೀವ ವೈವಿಧ್ಯತೆಯ ರಕ್ಷಣೆ,ಸ್ಥಳೀಯ ಜನರ ಸುಸ್ಥಿರ ಜೀವನಾಭಿವೃದ್ಧಿ ಕ್ರಮಕ್ಕೆ ಪ್ರೋತ್ಸಾಹ ಇವನ್ನೆಲ್ಲ ನವೀನ ರೀತಿಯಲ್ಲಿ ಕಾರ್ಯಗತಗೊಳಿಸಿರುವುದು, ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಧ್ಯೇಯಕ್ಕೆ ಸ್ಥಳೀಯ ಕೊಡುಗೆ ಇವು ಪ್ರಶಸ್ತಿಗೆ ಮಾನದಂಡಗಳು. ಅಪರೂಪದ ರಾಂಪತ್ರೆ ಜಡ್ಡಿ ಕಾಡುಗಳನ್ನು ಗುರುತಿಸಿ ನಕಾಶೆ ತಯಾರಿಸಿರುವುದು, ಅವುಗಳು ಎದುರಿಸುತ್ತಿರುವ ಸಮಸ್ಯೆ ಮತ್ತು ಪರಿಹಾರೋಪಾಯಗಳು, ಸ್ಥಳೀಯರೊಡನೆ ಸೇರಿ ಅಲ್ಲಿಯದೇ ಸಸ್ಯಗಳ ನರ್ಸರಿ ತಯಾರಿಕೆ, ಅವುಗಳನ್ನು ಸೂಕ್ತ ಮತ್ತು ಅವನತಿ ಹೊಂದುತ್ತಿರುವ ಜಡ್ಡಿ ಕಾಡುಗಳಲ್ಲಿ ವೈಜ್ಞಾನಿಕವಾಗಿ ನೆಟ್ಟು ಬೆಳೆಸುವ ಕೆಲಸವನ್ನು ಮಾಡಲಾಗಿತ್ತು. ನಿರಂತರವಾಗಿ ಅವುಗಳ ಸಂರಕ್ಷಣಾ ಮಹತ್ವವನ್ನು ಕಾರ್ಯಾಗಾರ, ತರಬೇತಿ ಏರ್ಪಡಿಸುವ ಮುಖಾಂತರ ತಿಳಿಸುವ ಪ್ರಯತ್ನ ಮಾಡಲಾಗಿತ್ತು.

ಇದರ ಜೊತೆಯಲ್ಲಿ ಅರಣ್ಯಾವಲಂಬಿ ಜೀವನಾಭಿವೃದ್ದಿ ಕ್ರಮಗಳನ್ನು ಪ್ರೋತ್ಸಾಹಿಸುವುದು ಸಾಂಘಿಕ ಜೇನು ಕೃಷಿ, ಉಪವನ ಉತ್ಪನ್ನಗಳ ಮೌಲ್ಯವರ್ಧನೆ, ಶುದ್ಧ ಇಂಧನ ಬಳಸಿ ಕಿರು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಕೆಲಸಗಳನ್ನು ಕೈಗೊಳ್ಳಲಾಗಿತ್ತು. ಐ.ಎಫ್.ಎಚ್.ಡಿ.ಸಂಸ್ಥೆಯ ಮುಖ್ಯಸ್ಥೆ ಅರುಣಾ, ಇತರ ಸಹೋದ್ಯೋಗಿಗಳಾದ ನಿಕು ಹಾಗೂ ಪ್ರತೀಕ್ ಅವರು ಪೂರಕ ಮಾಹಿತಿಯನ್ನು ವಿಶ್ವಸಂಸ್ಥೆಗೆ ಸಲ್ಲಿಸುವಲ್ಲಿ ನೆರವಾಗಿದ್ದರು. ಅಪರೂಪದ ಜೌಗು ಪ್ರದೇಶದ ಕಾಡಿನ ಸಂರಕ್ಷಣೆ, ಜಾಗತಿಕ ಹವಾಮಾನ ವೈಪರೀತ್ಯ ತಡೆಗೆ ಪ್ರಯತ್ನ, ಆರ್ಥಿಕ ಹಾಗೂ ಅಭಿವೃದ್ಧಿ ಮಾದರಿಯಲ್ಲಿ ಧನಾತ್ಮಕ ಬದಲಾವಣೆಯನ್ನು ತಳಮಟ್ಟದಿಂದ ಹಿಡಿದು ನೀತಿ ನಿರೂಪಕರವರೆಗೆ ಕೊಂಡೊಯ್ದದ್ದು ಹಾಗೂ ಇವು ಭೂಗೃಹ ಎದುರಿಸುತ್ತಿರುವ ಸವಾಲು ಎದುರಿಸಲು ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಪೂರಕ ಅಂಶಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆಯೆಂದು ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯಸ್ಥರಾದ ಅಚಿಮ್ ಸ್ಟೈನರ್ ನ್ಯೂಯಾರ್ಕನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45