ಈ ಕ್ಷಣ :

ಬಾಗಲಕೋಟೆಯಲ್ಲಿ ಕೋವಿಡ್ ಕರಿನೆರಳಿನ ಮಧ್ಯೆ ಕಾರ ಹುಣ್ಣಿಮೆ ಕರಿ ಆಚರಣೆ

Published 15 ಮಾರ್ಚ್ 2023, 23:28 IST
Last Updated 6 ಮೇ 2023, 23:58 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL: ವರದಿ: ರಾಚಪ್ಪ ಬನ್ನಿದಿನ್ನಿ ಬಾಗಲಕೋಟೆ: ಕೋವಿಡ್ ಎರಡನೆ ಅಲೆಯ ತಗ್ಗಿರುವ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ರೈತರ ಮೊದಲ ಹಬ್ಬ ಕಾರ ಹುಣ್ಣಿಮೆಯ ಕರಿ ಹರಿಯುವುದನ್ನು ಆಚರಿಸಿದರು.  ಬೆಳಗ್ಗೆ ಎತ್ತುಗಳಿಗೆ ಸಿಂಗಾರ ಮಾಡಿ, ಸಾಯಂಕಾಲ ಊರ ಅಗಸಿಯಲ್ಲಿ ಕರಿ ಹರಿಯಲಾಯಿತು. ಬಾಗಲಕೋಟೆ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಜನರೇ ಓಡಿಹೋಗಿ ಕರಿ ಹರಿಯುವ ವಿಶಿಷ್ಟ ಸಂಪ್ರದಾಯವಿದ್ದು, ಈ ಬಾರಿಯೂ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕದಲ್ಲಿ ವರ್ಷದ ಮೊದಲ ಹಬ್ಬ ಉತ್ತರ ಕನಾ೯ಟಕದಲ್ಲಿ ರೈತರು ಕಾರಹುಣ್ಣಿಮೆ ಹಬ್ಬವನ್ನು ವರ್ಷದ ಮೊದಲ ಹಬ್ಬವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು. ಉತ್ತರ ಕರ್ನಾಟಕದದಲ್ಲಿ ವಿಭಿನ್ನ, ಹಾಗೂ ರೈತರು ನಂಬಿಕೆಯಿಂದ ಕಾರ ಹುಣ್ಣಿಮೆ ಆಚರಿಸುವ ಪದ್ಧತಿ ತಲೆತಲಾಂತರದಿಂದ ಬಂದಿದೆ. ಕಾರಹುಣ್ಣಿಮೆ ದಿನ ಪ್ರಮುಖವಾಗಿ ಎತ್ತು, ಹೋರಿಗಳೇ ಆಕರ್ಷಣೆಯಾಗಿರುತ್ತವೆ. ಹುಣ್ಣಿಮೆಯಂದು ಎತ್ತು, ಹೋರಿಗಳ ಮೈತೊಳೆದು ರೈತರು ವಿವಿಧ ಬಗೆ ಶೃಂಗಾರದ ವಸ್ತುಗಳನ್ನು ಹಾಕುತ್ತಾರೆ. ಎತ್ತು, ಹೋರಿಗಳ ಕೊಂಬುಗಳಿಗೆ ಬಣ್ಣ ಬಳಿಯುತ್ತಾರೆ‌. ಮೈಮೇಲೆ ವಿಶೇಷವಾದ ಚಿತ್ತಾರ ಬಿಡಿಸಿ ಮೆರವಣಿಗೆ ಮಾಡುತ್ತಾರೆ. ಎತ್ತು, ಹೋರಿಗಳಿಗೆ ಕೃಷಿ ಚಟುವಟಿಕೆಯಿಂದ ವಿರಾಮ ನೀಡಲಾಗಿರುತ್ತೆ. ಸಿಂಗರಿಸಲಾದ ಎತ್ತುಗಳಿಗೆ ಹೋಳಿಗೆ, ಕಡುಬು ಖಾದ್ಯಗಳನ್ನು ಮಾಡಿ ಉಣಬಡಿಸುವ ಮೂಲಕ ಅನ್ನದಾತರು ತಮ್ಮ ಎತ್ತುಗಳ ಮೇಲಿನ‌ ಅಭಿಮಾನ ಮೆರೆಯುತ್ತಾರೆ. ಕಾರ ಹಬ್ಬದ ವಿಶೇಷತೆಯಲ್ಲಿ ಕರಿ ಹರಿಯುವ ಕಾರ್ಯಕ್ರಮವೂ ಒಂದು. ಸಂಜೆಯಾಗುತ್ತಿದಂತೆ ಕರಿ ಹರಿಯುವುದು ನಡೆಯುತ್ತದೆ. ಊರ ಅಗಸಿಯಲ್ಲಿ ಬೇವಿನ ತಪ್ಪಲಿನ ತೋರಣದ ನಡುವೆ ಕೊಬ್ಬರಿಯನ್ನು ಕಟ್ಟಲಾಗಿರುತ್ತೆ. ಕರಿ ಹರಿಯಲು ಬಿಳಿ, ಹಾಗೂ ಕೆಂದು ಬಣ್ಣದ ಎತ್ತುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ. ಹಲಗೆ ಸದ್ದು ಮಾಡುತ್ತಿದ್ದಂತೆ ಅಗಸಿ ಎದುರಿಗೆ ಕರಿ ಹರಿಯಲು ಎತ್ತುಗಳೊಂದಿಗೆ ರೈತರು ತಾ ಮುಂದು ನೀ ಮುಂದು ಎಂದು ಎತ್ತುಗಳನ್ನು ಓಡಿಸಿಕೊಂಡು ಬಂದು ಕರಿ ಹರಿಯುತ್ತಾರೆ. ಯಾವ ಬಣ್ಣದ ಎತ್ತು ಕರಿಹರಿಯುತ್ತೋ ಆ ಬಣ್ಣದ ಬೆಳೆ ಚೆನ್ನಾಗಿ ಬರುತ್ತೆ ಅನ್ನುವ ನಂಬಿಕೆ ರೈತರದ್ದಾಗಿದೆ. ಬಿಳಿ ಎತ್ತು ಮೊದಲು ಕರಿ ಹರಿದ್ರೆ ಬಿಳಿಜೋಳ, ಅಂದರೆ ಹಿಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ. ಇನ್ನು ಕೆಂದು ಬಣ್ಣದ ಕರಿ ಹರಿದ್ರೆ ಮುಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆಯನ್ನು ರೈತರು ಹೊಂದಿದ್ದಾರೆ. ಮೊದಲು ಕರಿ ಹರಿದ ಎತ್ತಿಗೆ ರೈತರೆಲ್ಲರೂ ಸೇರಿ ಮೆರವಣಿಗೆ ಮಾಡುತ್ತಾರೆ. ಕರಿ ಹರಿದ ಬಳಿಕ ಗುಂಡು ಎತ್ತುವ ಸ್ಪರ್ಧೆ ಇರುತ್ತದೆ.  ವರ್ಷವಿಡೀ ಕೃಷಿಯಲ್ಲಿ ತೊಡಗಿದ ರೈತರು ಗುಂಡು ಎತ್ತುವುದರರೊಂದಿಗೆ ದೈಹಿಕ ಕಸರತ್ತು ನಡೆಸುವ ಮೂಲಕ ಕ್ರೀಡಾ ಮನೋಭಾವ ಮೆರೆಯುತ್ತಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45